Breaking News

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು.

ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಶೇ. 100 ಕನ್ನಡಿಗರನ್ನು ನೇಮಕ ಮಾಡಿಕೊಳ್ಳಬೇಕೆಂದು ಪ್ರಸ್ತಾಪಿಸಲಾಗಿದೆ. ಆದರೆ ಅದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ.

ಎ ಮತ್ತು ಬಿ ವೃಂದದಲ್ಲೂ ಆದ್ಯತೆ ಮೇರೆಗೆ ಕನ್ನಡಿಗರಿಗೆ ಹೆಚ್ಚಿನ ಪ್ರಾಶಸ್ತ್ರಯ ನೀಡಬೇಕೆಂಬ ನಿಯಮ ಜಾರಿಗೊಳಿಸಲು ಚರ್ಚಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ