Breaking News
Home / ರಾಜ್ಯ / ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡ್ತೀನಿ ಅಂದಿದ್ರು ಗಾನ ಗಂಧರ್ವ

ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡ್ತೀನಿ ಅಂದಿದ್ರು ಗಾನ ಗಂಧರ್ವ

Spread the love

ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಅಂದರೆ ಅದೇನೋ ಪ್ರೀತಿ. ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಅನೇಕ ಬಾರಿ ಹೇಳಿದ್ದರು.

ಒಂದು ದಶಕಗಳ ಕಾಲ ಎದೆತುಂಬಿ ಹಾಡುವೆನು ಕಾರ್ಯಕ್ರಮವನ್ನು ನಡೆಸಿಕೊಂಡವುದರ ಜೊತೆಗೆ ಬೇರೆ ಭಾಷೆಗಳಲ್ಲಿ ಕೂಡ ಸಂಗೀತದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೊತೆಗೆ ತಾವೇ ತೀರ್ಪುಗಾರರಾಗಿ ಹತ್ತು ಹಲವು ಸಂಗೀತದ ಶೋಗಳಲ್ಲಿ ಕುಳಿತಿದ್ದರು. ಈ ವೇಳೆ ಪುಟಾಣಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಗೀತದ ಸರಿ-ತಪ್ಪುಗಳನ್ನು ತಿದ್ದಿದ್ದಾರೆ. ಈ ಮೂಲಕ ಸಂಗೀತದ ಎಸ್.ಪಿ.ಬಾಲಸುಬ್ರಹ್ಮಣ್ಯಂ ರಾಯಭಾರಿಯಾಗಿ ಮೆರೆದಿದ್ದಾರೆ

ಆಂಧ್ರದಲ್ಲಿ ಹುಟ್ಟಿ ಬೆಳೆದರೂ, ನಾನು ಹಿನ್ನೆಲೆ ಗಾಯಕನಾಗಿ ಹಾಡಿನ ಎರಡನೇ ಹಾಡೇ ಕನ್ನಡದಲ್ಲಿ. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿಯವರೆಗೂ ಬಂದಿದೆ. ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ನನಗೆ ಬೇರೆ ಯಾರಿಂದಲೂ ಸಿಕ್ಕಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಎಸ್.ಪಿ.ಬಿ ಸಾಕಷ್ಟು ಬಾರಿ ಹೇಳಿದ್ದರು.

ಬಾಲಸುಬ್ರಹ್ಮಣ್ಯಂ ಅವರು 2018ರಲ್ಲಿ ತೆರೆಕಂಡ ‘ದೇವದಾಸ್’ಚಿತ್ರದಲ್ಲಿ ನಟಿಸಿದ್ದರು. 1969ರಿಂದ ಇಲ್ಲಿಯವರೆಗೆ ಹಲವು ಭಕ್ತಿ ಪ್ರಧಾನ ಸಾಮಾಜಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ನೀಡಿದ್ದರು. ಕನ್ನಡ ಮಾತ್ರವಲ್ಲದೇ ಒಂದೇ ದಿನದಲ್ಲಿ ತಮಿಳು ಹಾಗೂ ತೆಲುಗಿನ 19 ಗೀತೆಗಳನ್ನು ರೆಕಾರ್ಡ್ ಮಾಡಿದ್ದರು. ಎಸ್.ಪಿ.ಬಿ ನಿರ್ವಹಣೆಯಲ್ಲಿ ಮೂಡಿಬರುತ್ತಿದ್ದ ಎದೆ ತುಂಬಿ ಹಾಡುವೆನು ಕಾರ್ಯಕ್ರಮವನ್ನು ಇಂದಿಗೂ ಜನ ಮರೆತಿಲ್ಲ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ