Breaking News

ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

Spread the love

ಮಂಗಳೂರು: ನಿರೂಪಕಿ ಹಾಗೂ ನಟಿ ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್ ನ ವಿಚಾರ ಮುಂದುವರಿದಿದೆ. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಅನುಶ್ರೀ ಮಾತ್ರ ವಿಚಾರಣೆಗೆ ಗೈರಾಗಿದ್ದಾರೆ.

ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ ಇಂದು ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

ನಿನ್ನೆ ರಾತ್ರಿ ಸೋಷಿಯಲ್ ಮೀಡಿಯಾ ಫೇಸ್‍ಬುಕ್‍ನಲ್ಲಿ ಪತ್ರಿಕಾ ಪ್ರಕಟಣೆ ಹಾಕಿದ್ದ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಸಿಸಿಬಿ ಪೋಲಿಸರ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಇಂದು ಮುಂಜಾನೆ 5ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದರು. ಆದರೆ ಅನುಶ್ರೀ ಮಾತ್ರ ಇಂದು ವಿಚಾರಣೆಗೆ ಹಾಜರಾಗಿಲ್ಲ. ಅನುಶ್ರೀ ವಿಚಾರಣೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಕ್ರೈಂ ಠಾಣೆ ಪೊಲೀಸರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು.

15 ಜನ ಅಧಿಕಾರಿಗಳು, ಸಿಬ್ಬಂದಿ ನೇಮಿಸಿ ವಿಚಾರಣೆಗೆ ತಯಾರಿ ಮಾಡಲಾಗಿತ್ತು. ಮೊದಲ ಹಂತದಲ್ಲಿ ಆರೋಪಿಗಳಾದ ಕಿಶೋರ್ ಅಮನ್, ತರುಣ್ ರಾಜ್ ಜೊತೆಗಿನ ಸಂಬಂಧ ಬಗ್ಗೆ ಪ್ರಶ್ನಿಸಿ, ಎರಡನೇ ಹಂತದಲ್ಲಿ ಸಾಕ್ಷ್ಯ ತೋರಿಸಿ ಅನುಶ್ರೀಗೆ ಪ್ರಶ್ನೆ ಮಾಡಬೇಕೆಂದಿದ್ದರು. ಈಗಾಗಲೇ ಬಂಧನವಾಗಿರುವ ಕಿಶೋರ್, ತರುಣ್, ನೌಶೀನ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕೊನಾಮಿಕ್&ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದು ಇಂದು ಸಾಕಷ್ಟು ಮಾಹಿತಿ ಸಂಗ್ರಹಿಸಿದ ಪೊಲೀಸರು ಸಂಜೆ ವೇಳೆಗೆ ಕಿಶೋರ್ ಹಾಗೂ ನೌಶೀನ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ