Breaking News
Home / new delhi / ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ.

ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಾಧುಸ್ವಾಮಿ, ಈ ಕುರಿತು ಸಿಎಂಗಳೊಂದಿಗೆ ಚರ್ಚಿಸುತ್ತೇನೆ. ಶಿಕ್ಷಕರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

 


Spread the love

About Laxminews 24x7

Check Also

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ;

Spread the loveಬೆಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ