Breaking News

ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ

Spread the love

ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.

ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ ಅದೆಲ್ಲಾ ಸುಳ್ಳು. ರೈತನ ಭೂಮಿಯನ್ನು ಹಣವಂತರು, ನೂರಾರು, ಸಾವಿರಾರು ಎಕರೆ ಜಮೀನು ತಗೋತಾರೆ. ರೈತರು ಅವರ ಅಧೀನರಾಗ್ತಾರೆ ಎಂದು ಸರ್ಕಾರಗಳ ವಿರುದ್ಧ ಕಿಡಿಕಾರಿದ್ರು.

 

ರೈತರ ಬಗ್ಗೆ ಕಾಳಜಿ ಇರುವ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ತಾರೆ. ಕೊರೊನಾದಿಂದ ಜನ ತುಂಬಾ ಕಷ್ಟಪಟ್ಟಿದ್ದಾರೆ. ಇಂತಹ ಸಮಯದಲ್ಲಿಯೂ ನಾವು ರೈತರ ಪರ ನಿಲ್ಲುತ್ತೇವೆ. ಸೋಮವಾರ ಸಾರ್ವಜನಿಕರಿಗೆ ತೊಂದರೆ ಆಗುತ್ತೆ, ಈ ಮೂಲಕ ಅವರ ಕ್ಷೇಮೆ ಕೇಳ್ತೀನಿ ಅಂದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ