ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. ಇತ್ತ ಮೆಜೆಸ್ಟಿಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆಗೆ ಯತ್ನಿಸಿದ್ದಾರೆ. ಆಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲಾ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೇ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ.ನಾರಾಯಣಗೌಡ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕರವೇ ಕಾರ್ಯಕರ್ತರ ಪೊಲೀಸರು ಬಂಧಿಸಿದ್ದಾರೆ.
Laxmi News 24×7