ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.
