Breaking News

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

Spread the love

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ.

ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ.

ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ ನೀರಿಲ್ಲದೆ ಸೋಂಕಿತರ ಗೋಳು ನೋಡೋರೆ ಇಲ್ಲ. ಅಲ್ಲದೆ ಶೌಚಾಲಯಗಳು ಸಹ ಬಳಸುವುದಕ್ಕೆ ಯೋಗ್ಯವಾಗಿಲ್ಲ. ವೈದ್ಯರು, ಮೇಲಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ನೀರಿಗಾಗಿ ಹೊರಗಡೆ ಹೋಗುವುದಕ್ಕೂ ಆಗದೆ ಸೋಂಕಿತರು ದಂಗಾಗಿ ಹೋಗಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ