ಕೊಪ್ಪಳ: ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಒಲಿದು ಬಂದ ಹಿನ್ನೆಲೆ ಮಾಧ್ಯದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ಬಿಜೆಪಿ ಪಕ್ಷ. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಹೀಗಾಗಿ ಸಹೋದರರ ಕುರಿತು ನಾನು ಯಾವುದೇ ಹೇಳಿಕೆ ನೀಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಮ್ಮ ಸಹೋದದರರ ಬಗ್ಗೆ ಯಾಕೆ ಗೊಂದಲ ಸೃಷ್ಠಿ ಮಾಡುತ್ತೀರಿ? ಅದರ ಬದಲು ಅಭಿವೃದ್ದಿ ಬಗ್ಗೆ ಮಾತನಾಡೋಣ ಅಂತಾ ಹೇಳಿದ್ರು.
ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿರುವ ಸಚಿವರು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನ ದರ್ಶನ ಪಡೆದುಕೊಂಡರು
Laxmi News 24×7