Breaking News

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ

Spread the love

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ.

ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ.

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಿಶಾಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಿಶಾಂತ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ