Breaking News

ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯ

Spread the love

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯಗೊಂಡಿದೆ.

ವಾಡಿಕೆಯ ಪ್ರಕಾರ ಸಿಬಿಐ,ಇಡಿ ಮುಂತಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ, ಆರೋಪಿಗಳನ್ನು ತತ್​​ಕ್ಷಣ ಬಂಧಿಸುವುದಿಲ್ಲ. ಅಕಸ್ಮಾತ್ ಆರೋಪಿಗಳು ವಿದೇಶಕ್ಕೆ ಪರಾರಿಯಾಗುವ ಅಥವಾ ಸಾಕ್ಷ್ಯ/ದಾಖಲೆಗಳನ್ನು ನಾಶ ಪಡಿಸುತ್ತಾರೆ ಎಂಬ ಗುಮಾನಿ ಬಂದ್ರೆ ಬಂಧನಕ್ಕೆ ಮುಂದಾಗುತ್ತದೆ. ಪ್ರಸ್ತುತ, ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದ ವಿಚಾರದಲ್ಲಿ ತಕ್ಷಣಕ್ಕೆ. ಸಿಬಿಐ ಬೆಳಗ್ಗೆಯಿಂದ ವಶಪಡಿಸಿಕೊಂಡಿರುವ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಲಿದೆ.

ನಂತರ, ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡುವ ಸಾಧ್ಯತೆಯಿದೆ. ಇಂದು ವಶಕ್ಕೆ ಪಡೆದ ವಸ್ತುಗಳು, ದಾಖಲೆಗಳು, ಚಿನ್ನಾಭರಣ, ಹಣದ ಮೂಲ ಬಗ್ಗೆ ಮಾಹಿತಿ ನೀಡಿ, ಸಹಿ ಪಡೆಯಲಿದೆ ಸಿಬಿಐ. ಡಿ.ಕೆ.ಶಿವಕುಮಾರ್ ಕುಟುಂಬದ ಎದುರಲ್ಲೇ ಮಹಜರು ನಡೆಯಲಿದೆ. ಬಳಿಕ, ವಿಚಾರಣೆಗೆ ಹಾಜರಾಗಲು ಡಿಕೆಶಿಗೆ ಸಿಬಿಐ ಸೂಚಿಸುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ