Breaking News
Home / ಜಿಲ್ಲೆ / ಬೆಂಗಳೂರು / ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ

ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ

Spread the love

ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ ಕಲ್ಲಿನಿಂದ ತಲೆಯನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಿನ್ನೆ ಮನೆಯಲ್ಲಿದ್ದ ಶ್ರೀಕಾಂತ್‍ನನ್ನು ಮೂರರಿಂದ ನಾಲ್ಕು ಜನರು ಬಂದು ಕರೆದುಕೊಂಡು ಹೋಗಿದ್ದಾರೆ. ನಂತರ ಅತ್ತಿಬೆಲೆ ಬಳಿಯ ಅರೇಹಳ್ಳಿ ಎಂಬ ಗ್ರಾಮದ ರಾಗಿ ಹೊಲದಲ್ಲಿ ಪಾರ್ಟಿ ಮಾಡಿದ್ದಾರೆ. ಎಲ್ಲರೂ ಕಂಠಪೂರ್ತಿ ಕುಡಿದಿದ್ದಾರೆ. ಈ ವೇಳೆ ಯಾವುದೋ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಶ್ರೀಕಾಂತ್ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಆತನನ್ನು ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ ಮಾಡಿದ್ದಾರೆ.

ಇಂದು ಬೆಳಿಗ್ಗೆ ಹೊಲಗಳಿಗೆ ಕೆಲಸಕ್ಕೆ ಎಂದು ಬಂದ ರೈತರು ಶವವನ್ನು ನೋಡಿದಾಗ ನಡೆದ ಘಟನೆ ಗೊತ್ತಾಗಿದ್ದು, ತಕ್ಷಣ ಅತ್ತಿಬೆಲೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸಹ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೊಡ್ಡ ಕಲ್ಲಿನಿಂದ ತಲೆಗೆ ಹೊಡೆದಿರೋದ್ರಿಂದ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೊದಲು ಆತನನ್ನು ಗುರುತಿಸುವುದು ಕಷ್ಟವಾಗಿತ್ತು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ