Breaking News

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ

Spread the love

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ.

ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಪೊಲೀಸರು 6 ಜಾನುವಾರು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ