Breaking News

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ

Spread the love

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ.

ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ.

ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ ಸಂಗ್ರಹ ಮಾಡುತ್ತಿದ್ದಾರಂತೆ. ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿಯ ಈ ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಪೊಲೀಸಪ್ಪನ ವಸೂಲಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.


Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ