Breaking News

ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್‌ವೈ

Spread the love

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

 

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ