Breaking News

ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದುವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿ

Spread the love

ಲಕ್ನೋ, ಅ.12- ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲೂ ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದು ವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಸಿದಂತೆ ಗೋಂಡಾ ಜಿಲ್ಲೆಯ ದೇವಸ್ಥಾನ ಅರ್ಚಕರೊಬ್ಬರ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿರುವುದನ್ನು ಉಲ್ಲೇಖಿಸಿ ಮಾಯಾವತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಟ್ವಿಟರ್‍ನಲ್ಲಿ ವಾಗ್ದಾಳಿ ನಡೆಸಿದ್ದಾರೆ

ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲಿ ಅರ್ಚಕರ ಮೇಲೆ ದಾಳಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಅದನ್ನು ಗಮನಿಸಿದರೆ ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಇನ್ನು ಮುಂದಾದರೂ ಆಡಳಿತ ನಡೆಸುತ್ತಿರುವವರು ಧಾರ್ಮಿಕ ಮುಖಂಡರ ಮೇಲೆ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ