Breaking News

ದುಷ್ಕರ್ಮಿಗಳಿಂದ ದನದ ಕೊಟ್ಟಿಗೆಗೆ ಬೆಂಕಿ: 3 ಹಸುಗಳು ಸಜೀವ ದಹನ

Spread the love

ಧಾರವಾಡ: ದನದ ಕೊಟ್ಟಿಗೆಗೆ ಬೆಂಕಿ ತಾಗಿ 3 ಹಸುಗಳ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಗ್ರಾಮದ ನೀಲಕಂಠಗೌಡ ಪಾಟೀಲ್‌ ಎಂಬುವವರಿಗೆ ಸೇರಿದ್ದ ದನದ ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಗೆ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ರಾಸುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಹ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Spread the love ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ