Breaking News

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ

Spread the love

ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು.

ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ ಕೈಯಿಂದ ಜಾರಿ ಬಿದ್ದು, ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿತ್ತು.

ಕೂಡಲೇ ತೆಪ್ಪ ನಡೆಸುವವರ ಗಮನಕ್ಕೆ ಬಂದಿದ್ದು, ಅವರ ಸಮಯ ಪ್ರಜ್ಞೆಯಿಂದ ಮಗುವನ್ನು ರಕ್ಷಣೆ ಮಾಡಿ ತಾಯಿಯ ಮಡಿಲಿಗೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ