Breaking News
Home / Uncategorized / ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ

Spread the love

ಬೆಂಗಳೂರು:  ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಲಿದ್ದಾರೆ.

ಈ ವಿಚಾರವಾಗಿ  ಮಾತನಾಡಿದ ಅವರು,  ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ,  ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ  ಎದುರಾಗಿದೆ. ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ/.  ಆಯಾ ಪ್ರದೇಶದಲ್ಲಿ 43 ಕಾಳಜಿ ಕೇಂದ್ರ ತೆರೆಯಲಾಗಿದೆ. 4864 ಜನರು ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದರು. 

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಮೊದಲು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದೇನೆ ಎಂದು ತಿಳಿಸಿದರು. 


Spread the love

About Laxminews 24x7

Check Also

ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Spread the love ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ