Breaking News

ಬಿಟೆಕ್ ವಿದ್ಯಾರ್ಥಿನಿ ಕೊಲೆ ಪ್ರಕರಣ- ಪೊಲೀಸರ ಎದುರು ಆರೋಪಿಯ ಅಚ್ಚರಿಯ ಹೇಳಿಕೆ

Spread the love

ಹೈದರಾಬಾದ್: ಆಂಧ್ರ ಪ್ರದೇಶದ ವಿಜಯರವಾಡ ನಗರದ ಬಿಟೆಕ್ ವಿದ್ಯಾರ್ಥಿನಿ ದಿವ್ಯ ತೇಜಸ್ವಿನಿ ಕೊಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಲಭಿಸಿದ್ದು, ಪ್ರಕರಣದ ಆರೋಪಿ ನಾಗೇಂದ್ರ ಪೊಲೀಸರ ಎದುರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ದಿವ್ಯ ತೇಜಸ್ವಿನಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ನಾಗೇಂದ್ರ ಬಾಬು, ಗುಂಟೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಕೃತ್ಯದ ಕುರಿತು ಪೊಲೀಸರ ಬಳಿ ಹೇಳಿಕೆ ನೀಡಿರುವ ಆರೋಪಿ, ದಿವ್ಯ ತೇಜಸ್ವಿನಿ ಹಾಗೂ ನನಗೆ ಒಂದು ವರ್ಷದ ಹಿಂದೆಯೇ ಮದುವೆಯಾಗಿತ್ತು. ಆಕೆ ಬಲವಂತ ಮಾಡಿದ ಹಿನ್ನೆಲೆಯಲ್ಲೇ ಮದುವೆಯಾಗಿದ್ದೆವು. ಆದರೆ ಆಕೆಯ ಕುಟುಂಬಸ್ಥರು ಕಳೆದ 7 ತಿಂಗಳಿಂದ ನ್ನಿಂದ ಆಕೆಯನ್ನು ದೂರ ಮಾಡಿದ್ದರು. ಮಾತನಾಡಲು ಕೂಡ ಅವಕಾಶ ನೀಡುತ್ತಿರಲಿಲ್ಲ.

ಮೂರು ವರ್ಷಗಳಿಂದ ನನಗೆ ದಿವ್ಯ ಪರಿಚಯ. ಒಂದು ವರ್ಷದ ಹಿಂದೆ ಮದುವೆಯಾಗಿತ್ತು. ಕುಟುಂಬಸ್ಥರು ನಮ್ಮ ಮದುವೆಗೆ ಒಪ್ಪಿಗೆ ಸೂಚಿಸಿದ ಕಾರಣ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ, ಇಬ್ಬರೂ ಚಾಕುವಿನಿಂದ ಕತ್ತು ಕೂಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೇವು ಎಂದು ಮಾಹಿತಿ ನೀಡುವುದಾಗಿ ವರದಿಯಾಗಿದೆ.

ಇತ್ತ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ನಾಗೇಂದ್ರ ಇಬ್ಬರು ಒಟ್ಟಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಬ್ಬರೂ ಪ್ರೀತಿ ಮದುವೆಯಾಗಿದ್ದರು ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಇಬ್ಬರ ವಾಟ್ಸಾಪ್ ಚಾಟ್ ಫೋಟೋಗಳು ಸಾಕಷ್ಟು ವೈರಲ್ ಆಗಿದೆ. ಆದರೆ ತಮ್ಮ ಮಗಳಿಗೆ ಮದುವೆಯಾಗಿಲ್ಲ, ಫೋಟೋಗಳು ಎಲ್ಲವೂ ಸುಳ್ಳು ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಗಳನ್ನು ನಿರಾಕರಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಗುತ್ತಿರುವ ಮಾಹಿತಿಯ ಅನ್ವಯ ಎಲ್ಲಾ ಪ್ರಕಾರಗಳಲ್ಲೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಸಂಪೂರ್ಣ ತನಿಖೆ ಬಳಿಕಷ್ಟೇ ಪ್ರಕರಣದ ಸತ್ಯಾಂಶ ಬೆಳಕಿಗೆ ಬರಬೇಕಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ