Breaking News

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್

Spread the love

ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಈ ಹಿನ್ನೆಲೆ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರ ವಿಶೇಷ ತಂಡವನ್ನು ನಿಯೋಜಿಸಿದೆ.

ಕರ್ನಾಟಕವೂ ಸೇರಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ತಜ್ಞರ ತಂಡ ಕರ್ನಾಟಕಕ್ಕೆ ಎರಡನೇ ಬಾರಿ ಬರಲಿದ್ದು ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ಮತ್ತು ಸಲಹೆಗಳನ್ನು ನೀಡಲಿದೆ.

ಕಳೆದ ಮೇ ತಿಂಗಳಲ್ಲಿ ಕೇಂದ್ರದ ಕೋವಿಡ್ ತಜ್ಞರ ತಂಡ ರಾಜ್ಯಕ್ಕೆ ಭೇಟಿ ಕೊಟ್ಟಿತ್ತು ಮತ್ತು ರಾಜ್ಯದ ಕೊರೊನಾ ನಿರ್ವಹಣೆ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ಆದರೆ ಕೇಂದ್ರದ ತಂಡ ಭೇಟಿ ಬಳಿಕ ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ವಿಭಿನ್ನವಾಗಿದ್ದು ಕೈ ಮೀರಿ ಹೋಗುತ್ತಿದೆ. ಈ ಹಿನ್ನೆಲೆ ಮತ್ತೊಮ್ಮೆ ಕೇಂದ್ರ ಸರ್ಕಾರ ರಾಜ್ಯಕ್ಕೆ ತಜ್ಞರ ನಿಯೋಜನೆ ಮಾಡಿದೆ.

ಕೇಂದ್ರದಿಂದ ನಿಯೋಜನೆಗೊಂಡಿರುವ ತಂಡ, ರಾಜ್ಯದಲ್ಲಿ ಸಕ್ರಿಯ ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣಗಳನ್ನು ಪಟ್ಟಿ ಮಾಡಲಿದೆ. ಜೊತೆಗೆ ಸೋಂಕು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಿದೆ.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ