Breaking News

ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ.

Spread the love

ವಿಜಯಪುರ: ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಜನ ನೀರಿನ ಮಧ್ಯೆ ಜೀವನ ಕಳೆಯುವಂತಾಗಿದೆ. ವಿಜಯಪುರ ಜಿಲ್ಲೆಯ ಇಂಡಿ, ಚಡಚಣ, ಆಲಮೇಲ ತಾಲೂಕಿನ ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಚಡಚಣ ತಾಲೂಕಿನ ಹೊಳೆಸಂಕ, ಧೂಳಖೇಡದಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ಇಂಡಿ ತಾಲೂಕಿನ ಮೀರಗಿಯಲ್ಲೂ ನೆರೆ ಕಡಿಮೆಯಾಗಿಲ್ಲ. ತಾರಾಪುರ, ಕುಮಸಗಿ, ದೇವಣಗಾಂವ್ ಗ್ರಾಮಗಳು ಇನ್ನೂ ನಡುಗಡ್ಡೆಯಾಗಿಯೇ ಉಳಿದಿವೆ. ಮನೆ ನಿಂತರೂ ಪ್ರವಾಹದ ಅಬ್ಬರ ನಿಂತಿಲ್ಲ. ಮಳೆ ನೀರು ಹಾವಿಯಾಗುತ್ತಿಲ್ಲ. ಮನೆಗಳು, ರಸ್ತೆಗಳು ಮಳೆ ನೀರಿನಿಂದ ಮುಳುಗಿವೆ. ರಸ್ತೆಯಲ್ಲಿ ಓಡಾಡಲು ದೋಣಿ ಬಳಸುವ ಪರಿಸ್ಥಿತಿ ಇದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ