ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಕ್ಯಾಂಟಿನ್ ನನ್ನು ಶಾಸಕ ಸತೀಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಮೂರು ಉದ್ದೇಶದಿಂದ ಕಾಂಗ್ರೆಸ್ ಕಚೇರಿಯಲ್ಲಿ ಕ್ಯಾಂಟಿನ್ ತೆರೆ ಯಲಾಗಿದೆ. ಸಾಮಾನ್ಯ ಜನರು, ಕಾರ್ಯಕರ್ತರಿಗೆ ಕಡಿಮೆ ಬೆಲೆಯಲ್ಲಿ ಆಹಾರ ನೀಡುವ ಹಾಗೂ ಕಾಂಗ್ರೆಸ್ ಮಹಾನ್ ನಾಯಕರ ಇತಿಹಾಸ ತಿಳಿಸಿಕೊಡುವ ಉದ್ದೇಶದಿಂದ ಕ್ಯಾಂಟಿನ್ ತೆರೆಯಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.
Laxmi News 24×7