Breaking News

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

Spread the love

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗಲ್ಲ. ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ. ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅವುಗಳಿಗೆ ಹಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಮುಖ್ಯಮಂತ್ರಿಗಳು ತಮ್ಮ ಇಲಾಖೆಗೆ ನಯಾಪೈಸೆ ಹಣ ಕೊಟ್ಟಿಲ್ಲ ಅಂತಾರೆ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ