Breaking News

ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Spread the love

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು.

ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ