Breaking News

ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ.

Spread the love

ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, ಮಹಿಳೆಯರು ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಒಂದು ತಿಂಗಳಿನಿಂದ ಶಾಲೆಯಲ್ಲಿಯೇ ವಾಸ ಮಾಡುತ್ತಿರುವ ಕುಟುಂಬಗಳನ್ನ ಕೇಳುವವರು ಇಲ್ಲದಂತಾಗಿದೆ.

ಆರಂಭದಲ್ಲಿ ಅಧಿಕಾರಿಗಳು ಬಂದು ಒಂದೆರಡು ಬಾರಿ ದಿನಸಿ ನೀಡಿದ್ದಾರೆ ನಂತರ ಇತ್ತ ಯಾರು ನೋಡಿಲ್ಲ. ಊಟಕ್ಕಾಗಿ ಕೂಲಿ ಮಾಡಬೇಕು ಅಡುಗೆ ಮಾಡಿಕೊಳ್ಳಬೇಕು ಅನ್ನೋದು ಸಂತ್ರಸ್ತರ ಅಳಲು. ತಾತ್ಕಾಲಿಕವಾಗಿ ಶೆಡ್ಡು ಹಾಕಿಕೊಡುವುದಾಗಿ ಹೇಳಿದ್ದ ಶಾಸಕ ಬಸನಗೌಡ ದದ್ದಲ ಇದುವರೆಗೂ ಯಾವುದೇ ವ್ಯವಸ್ಥೆ ಮಾಡಿಲ್ಲ. ನಿರಂತರ ಮಳೆಯಿಂದ ಶಾಲೆ ಆವರಣ ಸಹ ಕೆಸರು ಗದ್ದೆಯಂತಾಗಿದೆ. ಮಳೆಯಿಂದಾಗಿ ಕೂಲಿ ಕೆಲಸವೂ ಇಲ್ಲ. ಸಂತ್ರಸ್ತ ಕುಟುಂಬಗಳು ಶಾಲೆ, ಸಮುದಾಯ ಭವನವನ್ನೇ ಆಶ್ರಯಿಸಿವೆ. ನಮಗೆ ಸೂರು ಕಲ್ಪಿಸಿ ಅಂತ ಸಂತ್ರಸ್ತರು ಆಗ್ರಹಿಸಿದ್ದಾರೆ.

ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ, ಇದರಲ್ಲಿ 50 ಮನೆಗಳು ಸಂಪೂರ್ಣ ನೆಲಸಮವಾಗಿವೆ. ಸೂರು ಕಳೆದುಕೊಂಡಿರುವ ಜನ ಈಗ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇನ್ನೂ ಬಿದ್ದಮನೆಗಳಲ್ಲಿ ಕೆಲವರು ಬದುಕುತ್ತಿದ್ದಾರೆ. ಸಣ್ಣಪುಟ್ಟ ಶೆಡ್ ಗಳನ್ನ ಹಾಕಿಕೊಂಡು ಬದುಕುತ್ತಿರುವ ಜನ ಪ್ರತಿದಿನ ಗಾಳಿ ಮಳೆಗೆ ಹೆದರಿಕೊಂಡೆ ಜೀವನ ನಡೆಸುತ್ತಿದ್ದಾರೆ. ಆದ್ರೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾತ್ರ ಇವರ ಕಡೆ ಗಮನ ಹರಿಸುತ್ತಿಲ್ಲ. ಇದುವರೆಗೆ ಕೇವಲ ಎರಡು ಬಾರಿ ದಿನಸಿಯನ್ನ ನೀಡಿ ಅಧಿಕಾರಿಗಳು ಕೈ ತೊಳೆದುಕೊಂಡಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ