Breaking News
Home / ಜಿಲ್ಲೆ / ಬೆಂಗಳೂರು / ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

Spread the love

ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್​ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್​ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್​ ಸಾಹೇಬ್ರು, ಅಶೋಕಣ್ಣ ಮತ್ತು ಸಿಟಿ ರವಿ ನನ್ನ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನ್ನನ್ನು ಜನರು ಪ್ರೀತಿಯಿಂದ ಬಂಡೆ ಎಂದು ಕರೆಯುತ್ತಾರೆ. ಅದಕ್ಕೆ ಸಂತೋಷವಿದೆ. ಬಂಡೆಯಾಗಿ ನಾನು ವಿಧಾನ ಸೌಧಕ್ಕೆ ಚಪ್ಪಡಿಯಾದರೆ, ಜನ ನಡೆದುಕೊಂಡು ಹೋಗಲು ಆಗುತ್ತದೆ. ಡೈನಾಮಿಟ್ ಇಟ್ಟು ಪುಡಿ ಮಾಡಿದರೆ ಜಲ್ಲಿ ಕಲ್ಲು ಆಗಿ, ಅಡಿಪಾಯಕ್ಕೆ ಉಪಯೋಗಕ್ಕೆ ಬರುತ್ತದೆ. ಈ ಕಲ್ಲು ಬಂಡೆ, ಜಲ್ಲಿಯಾಗಿ, ಇಟ್ಟಿಗೆಯಾಗಿ ಎಲ್ಲಾ ರೀತಿಯಲ್ಲೂ ಉಪಯೋಗವಾಗುತ್ತದೆ ಎಂದರು.

ಆರ್​ಆರ್​ ನಗರದ ನಮ್ಮ ಅಭ್ಯರ್ಥಿ ಕುಸುಮಾ ದಿ.ಐಎಎಸ್​ ಅಧಿಕಾರಿ, ಡಿಕೆ ರವಿ ಅವರನ್ನು ಅಗ್ನಿ ಸಾಕ್ಷಿಯಾಗಿ, ಸಪ್ತಪದಿ ತುಳಿದು, ಎಲ್ಲರ ಸಾಕ್ಷಿಯಾಗಿ ಮದುವೆ ಆಗಿದ್ದಾರೆ. ಆದರೆ, ಅಕ್ಕ, ನಮ್ಮಕ್ಕ ಶೋಭಕ್ಕ ಗಂಡನ ಹೆಸರು ಬಳಸಬಾರದು ಅಂತಾರೆ ಹೆಂಗೆ? ಅವರು  ಹೆಸರು ಬಳಸಬಾರದು ಅಂತ್ಯಾಕೆ ಹೇಳಬೇಕು ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ