Breaking News
Home / ಅಂತರಾಷ್ಟ್ರೀಯ / ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್

ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್

Spread the love

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭ ಬಂಟ್ವಾಳ ನಗರ ಠಾಣಾ ಎಸ್ ಐ ಅವಿನಾಶ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಗುಂಡಿನ ದಾಳಿ ವೇಳೆ ಗ್ರಾಮಾಂತರ ಎಸ್ ಐ ಪ್ರಸನ್ನ ಅವರಿಗೂ ಗಾಯವಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಖಲೀಲ್ ನ ಜೊತೆಗಿದ್ದ ಹಫೀಝ್ ಮತ್ತು ಇನ್ನೋರ್ವ ಆರೋಪಿ ಸಮೀಪದ ಕಾಡು ಪ್ರದೇಶಕ್ಕೆ ಓಡಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ