Breaking News
Home / ಅಂತರಾಷ್ಟ್ರೀಯ / ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ.

ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು ತ್ವರಿತವಾಗಿ ಕೊವಿಡ್ ಲಸಿಕೆ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಆದರೆ ಪ್ರಥಮ ಹಂತದಲ್ಲಿ, ಸರ್ಕಾರಿ ಮತ್ತು ಖಾಸಗಿ ಕ್ಷೇತ್ರ ಸೇರಿದಂತೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವುದು ಆದ್ಯತೆಯಾಗಿದೆ.

 

ಲಸಿಕೆ ಒದಗಿಸಲು ಈವರೆಗೂ ನಡೆಸಲಾಗಿರುವ ಪೂರ್ವಸಿದ್ಧತೆಗಳ ಮಾಹಿತಿಯನ್ನು ಸಚಿವ ಡಾ. ಸುಧಾಕರ್ ತಮ್ಮ​ ಟ್ವಿಟ್ಟರ್​ ಖಾತೆ ಮೂಲಕ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ