Breaking News

ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

Spread the love

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು ಬೇಗ ಕರೆದುಕೊಳ್ಳುತ್ತಾನೆ ಎಂದು ಸಚಿವ ರಮೇಶ್ ಹೇಳಿದರು. ಇತ್ತೀಚೆಗೆ, ಸುರೇಶ್ ಅಂಗಡಿ ಸೋದರಮಾವ ಲಿಂಗರಾಜ ಪಾಟೀಲ್ ಇದೇ ರೀತಿಯ ಹೇಳಿಕೆ ನೀಡಿದ್ದರು. ಇದೀಗ, ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Spread the love ವಿಜಯಪುರಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ