Breaking News
Home / Uncategorized / ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ

ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ

Spread the love

ಬೆಂಗಳೂರು : ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದರು. ಶಿವಮೊಗ್ಗಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಲಿಸಲಿ. ಕೊರೊನಾ ಮಹಾಮಾರಿ ಕಡಿಮೆ ಆಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯಲ್ಲಿ ಮನವಿ ಮಾಡೋಣ,

ಕೊರೊನಾ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ ಎಂದು ಜನತೆಯಲ್ಲಿ ಮನವಿ ಮಾಡಿದರು.ನಿನ್ನೆ ಸಿಎಂ ಯಡಿಯೂರಪ್ಪ ಮಳೆಹಾನಿ ಪರಿಶೀಲನೆ ಬಳಿಕ ಅಧಿಕಾರಿಗಳು ನಾಪತ್ತೆಯಾದರು ಎನ್ನುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಎಲ್ಲ ಅಧಿಕಾರಿಗಳೂ ನಿನ್ನೆ ಇದ್ದರು, ಈಗಾಗಲೇ ನಿನ್ನೆ ಸಂಜೆಯಿಂದ ಮಳೆ ಸಂತ್ರಸ್ತರಿಗೆ ಅಧಿಕಾರಿಗಳು ಚೆಕ್ ಕೊಡುತ್ತಿದ್ದಾರೆ. ದಯವಿಟ್ಟು ಇನ್ನೊಮ್ಮೆ ನೀವೆ ಚೆಕ್ ಮಾಡಿಕೊಳ್ಳಿ ಎಂದರು.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ