Breaking News

ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ.

Spread the love

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ.

ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ!
     ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ.

ಹೌದು, ಮಹಾರಾಷ್ಟ್ರದ ಪುಣೆ ಗ್ರಾಮಾಂತರ ಪೊಲೀಸರು ಒಂದಲ್ಲ ಎರಡಲ್ಲ ಬರೋಬ್ಬರಿ 58 ಮೂಟೆ ಈರುಳ್ಳಿಯನ್ನು ಕದ್ದೊಯ್ದ ಚೋರರ ಗ್ಯಾಂಗ್​ ಒಂದನ್ನು ಬಂಧಿಸಿದೆ.

ಅಕ್ಟೋಬರ್​ 21ರಂದು ರೈತನೊಬ್ಬ ತನ್ನ ಉಗ್ರಾಣದಲ್ಲಿ ಶೇಖರಿಸಿದ್ದ ಈರುಳ್ಳಿ ಮೂಟೆಗಳನ್ನು ಈ ಕಳ್ಳ ಮಹಾಶಯರು ಹೊತ್ತೊಯ್ದಿದ್ದರು. ಇನ್ನು ರೈತ ನೀಡಿದ ದೂರಿನನ್ವಯ ಖದೀಮರನ್ನು ಬೆನ್ನಟಿದ ಪೊಲೀಸರು ಎಲ್ಲರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ ಹಾಗೆ, ಈರುಳ್ಳಿ ಕಳ್ಳರು ಅರೆಸ್ಟ್​ ಆಗೋ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ ಎಂದು ಖಾಕಿ ಪಡೆ ಮಾಹಿತಿ ನೀಡಿದೆ. ಕದ್ದ ಈರುಳ್ಳಿ ಒಟ್ಟು ಮೌಲ್ಯ ಸುಮಾರು 2.35 ಲಕ್ಷ ರೂಪಾಯಿ ಇದ್ದು ಈರುಳ್ಳಿ ಸಹ ಕಳ್ಳರ ಕೈಚಳಕಕ್ಕೆ ಒಳಗಾಗುವಂಥ ಸೂಕ್ತ ಟಾರ್ಗೆಟ್ ಆಗಿ ಪರಿಣಮಿಸಿದೆ.


Spread the love

About Laxminews 24x7

Check Also

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Spread the loveವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ