Breaking News

ಯೂಟ್ಯೂಬ್ ಚಾನೆಲ್ ಹೆಸರಲ್ಲಿ ಬೆದರಿಸಿ ಹಣ ವಸೂಲಿ

Spread the love

ಕಲಬುರಗಿ: ಯೂಟ್ಯೂಬ್ ಚಾನೆಲ್ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಗಿರೀಶ್ ತುಂಬಗಿ, ಗುಂಡು ಗುತ್ತೆದಾರ್ ಹಾಗೂ ರವಿಚಂದ್ರ್ ಗುತ್ತೆದಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲಾರಿ ಚಾಲಕನಿಗೆ ಹೆದರಿಸಿ 3 ಲಕ್ಷ 50 ಸಾವಿರ ಹಣ ವಸೂಲಿ ಮಾಡಿದ್ದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಹೊರವಲಯದ ರಸ್ತೆಯಲ್ಲಿ ಲಾರಿ ಅಡ್ಡಗಟ್ಟಿದ ಆರೋಪಿಗಳು ಲಾರಿಯಲ್ಲಿ ಕಳ್ಳತನದ ಅಕ್ಕಿ ಸಾಗಿಸುತ್ತಿದ್ದಿಯಾ ಹಣ ಕೊಡು, ಇಲ್ಲ ಅಂದ್ರೆ ಟಿವಿಯಲ್ಲಿ ಹಾಕಿ ಮರ್ಯಾದೆ ತೆಗೆಯುವುದಾಗಿ ಬೇದರಿಕೆ ಹಾಕಿದ್ದರು. ಅಲ್ಲದೆ ನಗದು ಹಣ ಇಲ್ಲದ ಹಿನ್ನೆಲೆ ಗೂಗಲ್ ಪೇ ಮುಖಾಂತರ ಆರೋಪಿಗಳು ಹಣ ಹಾಕಿಸಿಕೊಂಡಿದ್ದರು.

ಕಾರಿನಲ್ಲಿ ಬಂದ ಆರೋಪಿಗಳು, ತಾವು ಕಲ್ಯಾಣ ಕರ್ನಾಟಕ ನ್ಯೂಸ್ ಚಾನೆಲ್ ರಿಪೋರ್ಟರ್ ಅಂತ ಹೇಳಿಕೊಂಡಿದ್ದಾರೆ. ಲಾರಿ ಯಾದಗಿರಿ ಜಿಲ್ಲೆಯ ಗೂಗಿ ಗ್ರಾಮದಿಂದ ಬೀದರ್ ಜಿಲ್ಲೆಗೆ ಅಕ್ಕಿ ತೆಗೆದುಕೊಂಡು ಹೋಗುತ್ತಿತ್ತು. ಸಂದೀಪ್ ರಾಠೋಡ್ ಎಂಬ ಲಾರಿ ಚಾಲಕನ ಬಳಿ 3.50 ಲಕ್ಷ ಹಣ ವಸೂಲಿ ಮಾಡಿದ್ದರು.

ಲಾರಿ ಚಾಲಕ ಸಂದೀಪ್ ರಾಠೋಡ್ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ