Breaking News

ಸೇಂದಿ ಕಾಯಿಸುವ ಅಡ್ಡೆ ಮೇಲೆ ಅಬಕಾರಿ ಇಲಾಖೆ ದಾಳಿ

Spread the love

ಯಾದಗಿರಿ: ಸೇಂದಿ ಕಾಯಿಸುವ ಅಡ್ಡೆ ಮೇಲೆ ಯಾದಗಿರಿ ಅಬಕಾರಿ ಇಲಾಖೆ ಇಂದು ದಾಳಿ ನಡೆಸಿದೆ. ದಾಳಿಯಲ್ಲಿ ಸಂಗ್ರಹಿಸಿಟ್ಟ 1,030 ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕುರಬಗೇರಾ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದಲೂ ಕಳ್ಳಭಟ್ಟಿ ತಯಾರು ಮತ್ತು ಮಾರಾಟ ಮಾಡುವ ದಂಧೆ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಪೊಲೀಸರು, ಯಾದಗಿರಿ ಅಬಕಾರಿ ಉಪ ಅಧೀಕ್ಷಕರ ಸೂಚನೆ ಮೇರೆಗೆ, ಉಪ ವಿಭಾಗ ಶಹಾಪೂರ ಅಧಿಕಾರಿ ಬಸವರಾಜ ಜಾಮಗೊಂಡ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಯಪ್ಪ ಕಲಾಲ ಅಕ್ರಮವಾಗಿ ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿಯಾಗಿದ್ದು, ಈತ ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿದ್ದಾನೆ. ಸದ್ಯ ಸೇಂದಿ ವಶಕ್ಕೆ ಪಡೆದಿರುವ ಅಧಿಕಾರಿಗಳು, ಆರೋಪಿ ತಾಯಪ್ಪನಿಗಾಗಿ ತೀವ್ರ ಶೋಧಕಾರ್ಯ ನಡೆಸಿದ್ದಾರೆ.

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆಸಲಾಗಿದೆ. ಇನ್ನೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳಭಟ್ಟಿ ಮಾರಾಟ ದಂಧೆ ನಡೆಯುತ್ತಿದ್ದರು, ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಇಷ್ಟು ದಿನ ಜಾಣ ನಿದ್ದೆಗೆ ಜಾರಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಗುರುಮಿಠಕಲ್ ಪೊಲೀಸರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ