Breaking News

ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ

Spread the love

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ ಪುತ್ರ ವಿನೋದ್​. ಬಿಜಿಎಸ್​ ಆಸ್ಪತ್ರೆಯಲ್ಲಿ ತಂದೆ ಸೆಕ್ಯೂರಿಟಿ ಗಾರ್ಡ್​ ಆಗಿಕೆಲಸ ಮಾಡುತ್ತಿದ್ದು, ತಾಯಿ ಕೂಲಿ ಕೆಲಸ ಮಾಡುತ್ತಿದ್ದಾರೆ.ಶುಕ್ರವಾರ ಬೆಳಗ್ಗೆ ಎಂದಿನಂತೆ ತಂದೆ ಕೆಲಸಕ್ಕೆ ಹೋಗಿದ್ದು, ತಾಯಿ ಮಗನಿಗೆ ಸ್ನಾನ ಮಾಡಿಸಿ ನಂತರ ತಾನೂ ಸ್ನಾನಕ್ಕೆ ಹೋಗಿದ್ದರು.

ಈ ವೇಳೆ ಅಕ್ಕಪಕ್ಕದ ಮಕ್ಕಳ ಜತೆ ಆಟವಾಡುತ್ತಿದ್ದ ವಿನೋದ್​, ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್​ ಅಳವಡಿಸಲೆಂದು ತೋಡಲಾಗಿದ್ದ ಗುಂಡಿಯಲ್ಲಿ ಬಿದ್ದಿದ್ದ. ಮಕ್ಕಳು ಕೂಗಿಕೊಂಡಾಗ ಸ್ಥಳೀಯರು ಬಂದು ಬಾಲಕನನ್ನು ಮೇಲಕ್ಕೆತ್ತಿ ಕೂಡಲೇ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಮಗು ಬದುಕಲಿಲ್ಲ.

ಲಿಫ್ಟ್ ಅಳವಡಿಸಲು 6 ಅಡಿ ಗುಂಡಿ ತೋಡಿದ್ದರು. ಇತ್ತೀಚೆಗೆ ಸುರಿದ ಮಳೆ ಇಂದಾಗಿ ನೀರು ತುಂಬಿಕೊಂಡಿತ್ತು. ಯಾರೂ ಹೋಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡ ಮಾಲೀಕ ಮತ್ತು ಗುತ್ತಿಗೆದಾರನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ