Breaking News
Home / ರಾಷ್ಟ್ರೀಯ / ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಸಾಯಿಸಿರುವ ಮಗ

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಸಾಯಿಸಿರುವ ಮಗ

Spread the love

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು 19 ವರ್ಷದ ಮಗ ಕೊಲೆ ಮಾಡಿರುವ ಘಟನೆ ಮಥುರಾದಲ್ಲಿ ನಡೆದಿದೆ.

ಮನೋಜ್ ಮಿಶ್ರಾ ಎಂಬುವವರೇ ಮಗನಿಂದಲೇ ಕೊಲೆಯಾದ ದುರ್ದೈವಿ. 12ನೇ ತರಗತಿ ಓದುತ್ತಿದ್ದ ಮಗನೇ ಕೊಲೆ ಮಾಡಿದವನು. ತಂದೆ ಗದರಿದ ಎಂಬ ಕಾರಣಕ್ಕೆ ಕೋಪಗೊಂಡು, ಕಬ್ಬಿಣದ ರಾಡ್‍ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆ ನಂತರ ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ.

ಕೊಲೆಯಾದ ನಂತರ ತಾಯಿಯ ನೆರವನಿಂದ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ್ದಾನೆ. ಬೈಕ್ ನಲ್ಲಿ ಮೃತ ದೇಹ ತೆಗೆದುಕೊಂಡು ಹೋಗಿ ಪೆಟ್ರೋಲ್ ಹಾಕಿ ದೇಹ ಸುಟ್ಟಿದ್ದಾನೆ. ಮೇ. 3ರಂದು ಪೊಲೀಸರಿಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ದೇಹ ಪತ್ತೆಯಾಗಿದೆ. ಇತ್ತ ಮೇ. 27 ರಂದು ಕುಟುಂಬಸ್ಥರು, ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಅನಾಥವಾಗಿ ಪತ್ತೆಯಾಗಿದ್ದ ಮೃತ ದೇಹವನ್ನು ಆತನೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳು ಗುರುತಿಸಿದ್ದರು. ಹೀಗಾಗಿ ತನಿಖೆ ಕೈಗೊಂಡ ಪೊಲೀಸರು, ಮಗನೇ ಕೊಲೆ ಮಾಡಿದ್ದಾನೆ ಎಂದು ಸಾಬೀತು ಮಾಡಿದ್ದಾರೆ.

ಪೊಲೀಸರು ಸದ್ಯ ಮಗ ಹಾಗೂ ಆತನ ತಾಯಿ ಸಂಗೀತಾ ಮಿಶ್ರಾ ಅವರನ್ನು ಬಂಧಿಸಿದ್ದಾರೆ. ತಂದೆಯ ದೇಹವನ್ನು ನಾಶ ಮಾಡಲು ಬಾಲಕ 100ಕ್ಕೂ ಹೆಚ್ಚು ಬಾರಿ ಕ್ರೈಂ ಪ್ಯಾಟ್ರೋಲ್ ಎಂಬ ಹಿಂದಿ ಧಾರಾವಾಹಿ ನೋಡಿದ್ದ. ಬಾಲಕನ ಮೊಬೈಲ್ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ಸಂಗತಿ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ