Breaking News

ಗಡಿ ವಿವಾದ  ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿ

Spread the love

ಮುಂಬೈ: ಗಡಿ ವಿವಾದ  ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿಸಿದೆ.

ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಗಡಿ ವಿಚಾರ ರಾಜ್ಯಪಾಲರು ಕರ್ನಾಟಕದೊಂದಿಗೆ ಚರ್ಚಿಸುವಂತೆ ಬರೆದಿದ್ದು,   ಡಿಸಿಎಂ ಲಕ್ಷ್ಮಣ ಸವದಿ ಅವರ ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ  ಹೇಳಿಕೆ ಪ್ರಸ್ತಾಪಿಸಿದೆ.

ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ ಜನರಲ್ಲಿ ಆಕ್ರೋಶ ಮೂಡಿಸಿದೆ ಎಂದು ಶಿವಸೇನೆ ಸಂಪಾದಕೀಯದಲ್ಲಿ ಆರೋಪಿಸಿದೆ.

ಬೆಳಗಾವಿ, ಬೀದರ್ ಜಿಲ್ಲೆಯ   ಗಡಿ ಪ್ರದೇಶ ಕುರಿತಂತೆ ಕರ್ನಾಟಕ -ಮಹಾರಾಷ್ಟ್ರ ನಡುವಣ ವಿವಾದ ಸದ್ಯ ಸುಪ್ರೀಂ ಕೋರ್ಟ್‌ನಲ್ಲಿದೆ. ಆಗಸದಲ್ಲಿ ಸೂರ್ಯ, ಚಂದ್ರ ಇದೆಯೋ ಎಂಬುದನ್ನು ನೋಡಿ ಕೋರ್ಟ್ ಆದೇಶಿಸುವುದಿಲ್ಲ ಎಂದು ಶಿವಸೇನೆ ಹೇಳಿದೆ.

ಮಹಾರಾಷ್ಟ್ರ ರಾಜ್ಯಪಾಲರು ಈ ಕುರಿತು ಕರ್ನಾಟಕ ರಾಜ್ಯಪಾಲರ ಜೊತೆಗೆ ಚರ್ಚಿಸಬೇಕು. ಕನಿಷ್ಠ ಬೆಳಗಾವಿಯ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಲು ಸಮಯಾವಕಾಶ ನಿಗದಿಪಡಿಸಲಾದರೂ ನೆರವು ನೀಡಬೇಕು ಎಂದು ಒತ್ತಾಯಿಸಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ