Breaking News

ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಾನ್ ಜೋನಸ್, ಜಾನ್ ಬೋಸ್ಕೊ, ಅಂಥೋಣಿ ಆನಂದ್ ಕುಮಾರ್, ಸೈಮನ್ ಸ್ಟಾಲಿನ್, ಭಾಗ್ಯರಾಜ್, ಅಂತೋಣಿ ರಾಜ್ ಹಾಗೂ ಸೇಸುರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಚಾಮರಾಜನಗರ ಜಿಲ್ಕೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಕರಚಿಕಟ್ವೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 7 ನಾಡ ಬಂದೂಕು ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಈ ಭರ್ಜರಿ ಕಾರ್ಯಾಚರಣೆ ಮಾಡಿ ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ