Breaking News

ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…

Spread the love

ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ ಹೆಳಾಕ ಆಗೋಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ನಾಡಿನ ನೆಲ ಜಲ ಭಾಷೆಗೆ ವಿರೋಧ ಮಾಡುತ್ತ ಬಂದವರನ್ನು ಪಕ್ಷಕ್ಕೆ ಅಹ್ವಾನಿಸುವ ಮೊದಲು ರಾಷ್ಟ್ರೀಯ ಪಕ್ಷವಾಗಿ ಆ ಪಕ್ಷದ ಮಂತ್ರಿಗಳು ಹತ್ತು ಬಾರಿ ಯೋಚಿಸಬೇಕಿತ್ತು, ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


Spread the love

About Laxminews 24x7

Check Also

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ