ಬಾಗಲಕೋಟೆ: ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ.
ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ ಕೊಟ್ಟು ನಿಂತರು ಹಾವ-ಭಾವ ನೋಡಿ ಸ್ಥಳೀಯರು ಹಾಗೂ ದಾರಿಹೋಕರಿಗೆ ಆಶ್ಚರ್ಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಶಾಲಾ ಶಿಕ್ಷಕರೊಬ್ಬರ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.