Breaking News

ಕಾದಾಟದಲ್ಲಿ ಬಾಲ ಕಳೆದುಕೊಂಡು ನೋವು ತಾಳಲಾರದೆ ನೀರಲ್ಲಿಯೇ ನಿಂತ ಸಲಗ

Spread the love

ಚಾಮರಾಜನಗರ: ಕಾದಾಟದಲ್ಲಿ ಬಾಲ ಕಳೆದುಕೊಂಡ ಆನೆ ನೋವು ತಾಳಲಾರದೆ ನದಿಗಿಳಿದು ನೀರಲ್ಲಿಯೇ ನಿಂತ ಘಟನೆ ಚಾಮರಾಜನಗರದ ಕಾವೇರಿ ವನ್ಯ ಜೀವಿ ವ್ಯಾಪ್ತಿಯಲ್ಲಿ ನಡೆದಿದೆ.

ಕಾವೇರಿ ವನ್ಯಧಾಮದ ಭೀಮೇಶ್ವರಿ ಕಳ್ಳಭೇಟೆ ಶಿಬಿರದ ಬಳಿ ಈ ಘಟನೆ ನಡೆದಿದ್ದು, ಬಾಲ ತುಂಡಾಗಿ ಗಾಯವಾಗಿರುವ ಆನೆ ನೊಣಗಳ ಹಾವಳಿ ಹಾಗೂ ನೋವು ತಾಳಲಾರದೆ ನದಿಗಿಳಿದಿದೆ. ಈ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.

ಗಾಯಗೊಂಡಿರುವ ಆನೆ ಮೇಲೆ ನಿಗಾ ಇಟ್ಟಿರುವ ಅರಣ್ಯ ಸಿಬ್ಬಂದಿ ದಸರಾ ಆನೆಗಳಾದ ಅಭಿಮನ್ಯು ಹಾಗು ಕೃಷ್ಣ ಆನೆಯನ್ನು ಕರೆಸಿಕೊಂಡಿದ್ದಾರೆ. ಈ ಆನೆಗಳ ಮೂಲಕ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಮೂರು ಟೀಂ ರಚನೆ ಮಾಡಿ ಆನೆಯ ಹುಡುಕಾಟ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಸಂಗಂ ವಲಯ ವ್ಯಾಪ್ತಿಯಲ್ಲಿ ಆನೆ ಬೀಡು ಬಿಟ್ಟಿರುವ ಸಾಧ್ಯತೆಯಿದ್ದು, ಸೆರೆಹಿಡಿದು ಚಿಕಿತ್ಸೆ ನೀಡಲೂ ಪ್ಲಾನ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ