Breaking News

ಆನ್‍ಲೈನ್ ಶಿಕ್ಷಣ ದೂರು – ಕಟ್ಟುನಿಟ್ಟಿನ ಅನುಪಾಲನೆಗೆ ಸುರೇಶ್ ಕುಮಾರ್ ಸೂಚನೆ

Spread the love

ಬೆಂಗಳೂರು: ಆನ್‍ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ, ಸಾರ್ವಜನಿಕರ ಯಾವುದೇ ದೂರುಗಳಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ, ಸಾರ್ವಜನಿಕ ಸಹಾಯವಾಣಿಗೆ ಫೋನ್ ಕರೆ ಮೂಲಕ ದಾಖಲಿಸಬಹುದೆಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆನ್‍ಲೈನ್ ಶಿಕ್ಷಣ ಕುರಿತಂತೆ ಹೊರಡಿಸಲಾದ ಸೂಚನೆಗಳನ್ವಯ ಸೂಕ್ತ ಅನುಪಾಲನಾ ವ್ಯವಸ್ಥೆ ಜಾರಿಯಲ್ಲಿಡುವ ಕುರಿತು ಮತ್ತು ಈ ಸುತ್ತೋಲೆಗಳ ಅನುಷ್ಠಾನದಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು. ಸಾರ್ವಜನಿಕರು ಆನ್‍ಲೈನ್ ಕುರಿತ ದೂರುಗಳನ್ನು ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸಪ್ ಸಂಖ್ಯೆ-9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರುವ ಮೂಲಕ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಇಂತಹ ದೂರುಗಳನ್ನು ನಿರ್ವಹಿಸಲು ಕೂಡಲೇ ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಬೆಂಗಳೂರು, ಕಲಬುರಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರುಗಳು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಆನ್‍ಲೈನ್ ಶಿಕ್ಷಣದಲ್ಲಿನ ಸಮಸ್ಯೆಗಳನ್ನು ಮತ್ತು ದೂರುಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಶನಿವಾರ ನಗರಗಳ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಇಲಾಖೆಯ ಆಯುಕ್ತರಿಗೆ ಸಚಿವರು ಸೂಚಿಸಿದರು.

ಯಾವುದೇ ಶಾಲೆಗಳಿರಲಿ ಆನ್‍ಲೈನ್ ಶಿಕ್ಷಣವನ್ನು ತಜ್ಞರ ಸಮಿತಿ ಶಿಫಾರಸಿನನ್ವಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ವೈಜ್ಞಾನಿಕವಾಗಿಯೇ ನಿರ್ವಹಿಸುವ ಕುರಿತು ಅಗತ್ಯ ಅನುಪಾಲನಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಬಿಇಒಗಳು ಆನ್‍ಲೈನ್ ತರಗತಿಗಳ ಪರಾಮರ್ಶೆ ಮಾಡುವದರೊಂದಿಗೆ ಕೇಂದ್ರ ಕಚೇರಿಯಲ್ಲಿ ಈ ಕುರಿತ ಮಾಹಿತಿ ಯಾವುದೇ ಸಂದರ್ಭದಲ್ಲಿಯೂ ದೊರೆಯವಂತಾಗಬೇಕು ಎಂದು ಸುರೇಶ್ ಕುಮಾರ್ ಸೂಚಿಸಿದರು. ಈ ಬಗ್ಗೆ ಕೂಡಲೇ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಹ ನಿರ್ದೇಶನ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ