Breaking News

ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ.

Spread the love

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತ ಸಂಸ್ಕøತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿಯರವನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿತ್ತು. ಈ ಕಾರಣದಿಂದ ಸಿಟಿ ರವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಹೀಗಾಗಿ ಪಕ್ಷದ ಹುದ್ದೆ ನೀಡಿದರೆ ಸಚಿವ ಸ್ಥಾನದಲ್ಲಿ ಮುಂದುವರಿಯುವಂತಿಲ್ಲ. ಈ ಕಾರಣಕ್ಕೆ ಅಕ್ಟೋಬರ್ ಮೂರರಂದು ಸಿಎಂ ಯಡಿಯೂರಪ್ಪ ಅವರಿಗೆ ಸಿಟಿ ರವಿ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆ ಅಂಗೀಕಾರ ಆಗಿರಲಿಲ್ಲ. ಇಂದು ರಾಜ್ಯಪಾಲ ವಿಆರ್ ವಾಲಾ ಅವರು ಅಧಿಕೃತವಾಗಿ ಅಂಗೀಕಾರ ಮಾಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ