Breaking News

ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್‍ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ.

Spread the love

ಬೆಂಗಳೂರು: ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್‍ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ. ಸುಧಾ ಅತ್ಯಾಪ್ತೆ ರೇಣುಕಾ ಚಂದ್ರಶೇಖರ್ ಮನೆ ಮೇಲೆ ರೇಡ್ ಮಾಡಿದ್ದ ಎಸಿಬಿ ಅಧಿಕಾರಿಗಳು ಸಿಕ್ಕಿದ ಸಂಪತ್ತುಗಳನ್ನು ನೋಡಿ  ದಂಗಾಗಿ ಹೋಗಿದ್ದಾರೆ.

ಬ್ಯಾಟರಾಯನಪುರದಲ್ಲಿರುವ ರೇಣುಕಾ ಚಂದ್ರಶೇಖರ್ ಪ್ಲಾಟ್‍ನಲ್ಲಿ ಮಣಬಾರದಷ್ಟು ಚಿನ್ನಾಭರಣ, ನಗ-ನಾಣ್ಯ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 250 ಕೋಟಿ ದಾಟಬಹುದು ಎಂದು ಎಸಿಬಿ ಅಧಿಕಾರಿಗಳು ಅಂದಾಜಿಸಿದ್ದಾರೆ.ರೇಣುಕಾ ಚಂದ್ರಶೇಖರ್ ಮನೆಯಲ್ಲಿ ಇನ್ನೂ ಹಣ ಎಣಿಕೆ ಮತ್ತು ದಾಖಲೆ ಪರಿಶೀಲನೆ ಕಾರ್ಯ ಮುಂದುವರಿದಿದೆ. ಬ್ಯಾಂಕ್ ವ್ಯವಹಾರ ಲೆಕ್ಕಾಚಾರ ಮಾಡಲು ಇನ್ನೂ ಮೂರು ದಿನ ಬೇಕಾಗಬಹುದು ಅಂತ ಎಸಿಬಿ ಹೇಳಿದ್ದು, ರೇಣುಕಾ ಆಸ್ತಿ-ಪಾಸ್ತಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ