ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.
ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.