Breaking News

ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ

Spread the love

ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು.

ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ ತೀರದಿಂದ ಸುಮಾರು 20 ಮೀಟರ್ ದೂರದಲ್ಲಿ ಮುಳುಗುತ್ತಿದ್ದ ಅವರನ್ನು ರಕ್ಷಿಸಲು ಜೆಟ್ ಸ್ಕೀ ಮತ್ತು ಪ್ರವಾಸಿ ದೋಣಿಯ ಚಾಲಕರು ಬಂದಿದ್ದಾರೆ.

ಜೆಟ್ಸ್ಕಿ ಬೋಟ್ ನ ಮೂಲಕ ಮೊದಲು ರಕ್ಷಣೆ ಮಾಡಿ ಪ್ರವಾಸಿಗರು ಸೈಂಟ್ ಮೇರಿಸ್ ತೆರಳುವ ದೋಣಿಗೆ ಹಾಕಿದ್ದಾರೆ. ಈ ಮೂಲಕ ಅಪಾಯದಲ್ಲಿದ್ದ ಮೂವರನ್ನೂ ರಕ್ಷಣೆ ಮಾಡಲಾಯ್ತು. ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11:36 ಸುಮಾರಿನಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ವಿಪರೀತವಾಗಿ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಅಂತ ಎಷ್ಟು ಹೇಳಿದರೂ ಕೂಡ ಮಾತನ್ನು ಧಿಕ್ಕರಿಸಿ ಪ್ರವಾಸಿಗರು ನೀರಿಗಿಳಿಯುತ್ತಾರೆ.

ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ