Breaking News

ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ: ಕುಸುಮಾಗೆ ಟಾಂಗ್

Spread the love

ಬೆಂಗಳೂರು: ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ ಎಂದು ಉಪಚುನಾವಣಾ ಫಲಿತಾಂಶದಲ್ಲಿ ಜಯಗಳಿಸಿರುವ ಮುನಿರತ್ನ ಅವರು ಕಾಂಗ್ರೆಸ್ಸಿನ ಕುಸುಮಾಗೆ ಟಾಂಗ್ ನೀಡಿದ್ದಾರೆ.

ಗೆಲುವು ಸಾಧಿಸಿರುವ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ರಾಜರಾಜೇಶ್ವರಿ ನಗರದ ಮತದಾರರಿಗೆ ಧನ್ಯವಾದ ತಿಳಿಸಿದರು. ಇದೇ ವೇಳೆ ಪ್ರತಿಸ್ಪರ್ಧಿ ಬಗ್ಗೆ ಮಾತನಾಡಿ, ಸತ್ಯ ಮಾತಾಡಿ. ಕೊನೆಯ ಕ್ಷಣದಲ್ಲಿ ನಾನು ಬಳಸದೇ ಇರುವ ಪದವನ್ನು ಬಳಸಿದ್ದೇನೆ ಅಂತ ಕಣ್ಣೀರು ಹಾಕಿದ್ದೀರಲ್ವ ಅದಕ್ಕಿಂತ ದೊಡ್ಡ ತಪ್ಪು ಇನ್ಯಾವುದೂ ಇಲ್ಲ. ಇನ್ನು ಮುಂದೆ ಇಂತಹ ತಪ್ಪುಗಳನ್ನು ಮಾಡಬೇಡಿ. ನನ್ನ ಬಾಯಲ್ಲಿ ಕೊನೆಯುಸಿರು ಇರುವವರೆಗೆ ಯಾವುದೇ ಹೆಣ್ಣು ಮಗಳಿಗೆ ಕೆಟ್ಟದಾಗಿ ಬೈದಿಲ್ಲ, ಬೈಯೋದೂ ಇಲ್ಲ. ಅಂತಹ ಪಾಪದ ಕೆಲಸ, ಪಾಪದ ಮಾತುಗಳು ನನ್ನ ಬಾಯಲ್ಲಿ ಬರಲ್ಲ. ಆದರೂ ಅಂತಹ ಪಾಪದ ಪದವನ್ನು ನಾನು ಉಪಯೋಗಿಸಿದ್ದೀನಿ ಎಂದು ಕಣ್ಣೀರು ಹಾಕಿದ್ರಿ. ಹೀಗಾಗಿ ಇನ್ನು ಮುಂದಕ್ಕಾದರೂ ಸತ್ಯ ಮಾತಾಡಿ ಎಂದು ಸಲಹೆ ಎಂದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ