Breaking News

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ:ಪ್ರತಾಪ್ ಸಿಂಹ

Spread the love

ಮೈಸೂರು: ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿರುವ ಅವರು, ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯನವರಿಗೆ ಗೊತ್ತಾಗುತ್ತಿದೆ. ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್‍ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರಬಹುದು. ಇದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು. ಆದರೆ ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ