Breaking News

ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!

Spread the love

ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್‍ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ ಮಹಿಳೆಯರು ಸಿಹಿ ಹಂಚಿ ಸಂಭ್ರಮಿಸಿದರು.

ಕೊನೆಗೂ ನಿರ್ಭಯಾ ಆತ್ಮಕ್ಕೆ ಶಾಂತಿ ದೊರೆತಿದೆ ಮತ್ತು ಅಕೆಯ ಪೋಷಕರು ನಡೆಸಿದ ಸುದೀರ್ಘ ಕಾನೂನು ಸಮರಕ್ಕೆ ನ್ಯಾಯ ಲಭಿಸಿದೆ ಎಂಬು ಮಹಿಳೆಯರು ಸಂತೃಪ್ತ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.ನಿರ್ಭಯಾ ಚಿರಾಯುವಾಗಲಿ, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಮೊಳಗಿದವು.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ