Breaking News

ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಕಳ್ಳ

Spread the love

ಬೆಂಗಳೂರು, ನ.10- ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಉತ್ತರ ವಿಭಾಗದ ಆರ್‍ಟಿ ನಗರ ಠಾಣೆ ಪೊಲೀಸರು ಬಂಧಿಸಿ 14.1 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಕೋಲಾರದ ವೇಮಗಲ್, ನರಸಾಪುರದ ಸಂತೋಷ್ (36) ಬಂಧಿತ ಆರೋಪಿ. ಈತನಿಂದ 350.3 ಗ್ರಾಂ ತೂಕದ ಚಿನ್ನಾಭರಣ ಮತ್ತು ಎಲ್‍ಇಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ.

ಮುನೇಶ್ವರ ಬ್ಲಾಕ್‍ನಲ್ಲಿ ವಾಸವಾಗಿರುವ ಮುರಳಿಧರ್ ಎಂಬುವವರು ಲಾಕ್‍ಡೌನ್ ಸಮಯದಲ್ಲಿ ಏಪ್ರಿಲ್ 3ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಹಾಸನಕ್ಕೆ ಹೋಗಿದ್ದರು. ಮೇ 13ರಂದು ಮುರಳಿಧರ್ ಕುಟುಂಬ ಹಾಸನದಿಂದ ಬೆಂಗಳೂರಿಗೆ ವಾಪಸಾದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕಳ್ಳರು ಮನೆಯ ಬಾಗಿಲು ಒಡೆದು ಒಳನುಗ್ಗಿ ಬೆಡ್‍ರೂಮ್‍ನಲ್ಲಿದ್ದ ಬೀರು ಮೀಟಿ ಹಣ, ಆಭರಣ ಕಳ್ಳತನ ಮಾಡಿರುವುದು ಕಂಡುಬಂದಿದೆ.


Spread the love

About Laxminews 24x7

Check Also

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

Spread the love ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ